Current Date 26 Aug, 2026

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಜಯಲಕ್ಷ್ಮಿ ದರ್ಶನ್ ಪೊಲೀಸ್ ಠಾಣೆಗೆ ಹಾಜರ್

ದಿನದಿಂದ ದಿನಕ್ಕೆ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಾಕಷ್ಟು ತಿರುವು ಪಡೆದುಕೊಳ್ಳುತ್ತಿದೆ. ಮೊದಲಿಗೆ ನಾಲ್ವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು. ಆದರೆ ಅವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಸಾಕಷ್ಟು ಶಾಕಿಂಗ್ ಸಂಗತಿಗಳು ಹೊರ ಬಂದಿತ್ತು. ಪ್ರಕರಣದಲ್ಲಿ ನಟ ದರ್ಶನ್, ಪ್ರೇಯಸಿ ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದೀಗ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಪತ್ನಿ ವಿಜಯಲಕ್ಷ್ಮಿಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ. ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಬಂದು ವಿಜಯಲಕ್ಷ್ಮಿ ವಿಚಾರಣೆ ಎದುರಿಸುತ್ತಿದ್ದಾರೆ. ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್ ಧರಿಸಿದ್ದ ಶೂ ಅನ್ನು ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿತ್ತು.