ತಿರುಮಲ ತಿರುಪತಿ ದೇವಸ್ಥಾನದ ಶ್ರೇಷ್ಠ ಲಡ್ಡು ಪ್ರಸಾದ ಈಗ ವಿವಾದಕ್ಕೆ ಕಾರಣವಾಗಿದೆ. ಲಡ್ಡು ತಯಾರಿಕೆಗೆ ಗುಣಮಟ್ಟವಿಲ್ಲದ ಪದಾರ್ಥಗಳು ಹಾಗೂ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಭಕ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.