Current Date 13 Jun, 2026

ಹಾವೇರಿಯಲ್ಲಿ ಅಪ್ಪು ಟೆಂಪಲ್ ಉದ್ಘಾಟನೆ; ಭಾವುಕರಾದ ಅಶ್ವಿನಿ ಪುನೀತ್ ರಾಜ್‌ಕುಮಾರ್

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆಯ ನೋವು ಇನ್ನೂ ಕನ್ನಡಿಗರನ್ನು ಕಾಡುತ್ತಲೇ ಇದೆ. ಅದರಲ್ಲೂ ಅಪ್ಪು ಅಭಿಮಾನಿಗಳು ಅವರ ನೆನೆಪಿನಲ್ಲಿಯೇ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ಹೆಸರಿನಲ್ಲಿ ಸಾಮಾಜಿಕ ಕೆಲಸಗಳು ನಡೆಯುತ್ತಿವೆ. ಕೆಲವೆಡೆ ಪುತ್ಥಳಿಗಳನ್ನು ನಿರ್ಮಿಸುತ್ತಿದ್ದಾರೆ. ಇನ್ನು ಹಾವೇರಿಯ ಅಪ್ಪು ಅಭಿಮಾನಿ ಗುಡಿಯನ್ನೇ ಕಟ್ಟಿದ್ದಾನೆ.