Current Date 15 May, 2026

ಸಂಭವಾಮಿ ಯುಗೇಯುಗೇ’ ಸಿನಿಮಾ ಮೋಷನ್ ಪೋಸ್ಟರ್ ಬಿಡುಗಡೆ

ಅಧರ್ಮ ಹೆಚ್ಚಾದಾಗೆಲ್ಲ ತಾನು ಮತ್ತೆ ಮತ್ತೆ ಹುಟ್ಟಿ ಬರುತ್ತೇನೆ ಎಂಬುವ ಶ್ರೀಕೃಷ್ಣನ ಮಾತನ್ನೇ ಆದರ್ಶವಾಗಿಟ್ಟುಕೊಂಡು ಕತೆ ಬರೆದು ಮಾಡಲಾಗಿರವ ಸಿನಿಮಾಕ್ಕೆ ಅದನ್ನೇ ಹೆಸರನ್ನಾಗಿ ಇಡಲಾಗಿದೆ.
ಶ್ರೀಕೃಷ್ಣ ಭಗವದ್ಗೀತೆಯಲ್ಲಿ “ಸಂಭವಾಮಿ ಯುಗೇಯುಗೇ” ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತನ್ನೇ ಸಿನಿಮಾದ ಹೆಸರನ್ನಾಗಿಸಿಕೊಂಡ ಸಿನಿಮಾ ಒಂದು ಬಿಡುಗಡೆ ಆಗಲಿದೆ. ಸಿನಿಮಾದ ಹೆಸರು “ಸಂಭವಾಮಿ ಯುಗೇಯುಗೇ” . ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಅಡಿಯಲ್ಲಿ ಪ್ರತಿಭಾ ನಿರ್ಮಾಣ ಮಾಡಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನ ಮಾಡಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಸಿನಿಮಾದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.