ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿ ನಾಲ್ಕು ತಿಂಗಳುಗಳು ಕಳೆದಿವೆ. ಹೊರ ಬರಲು ಅವರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದರಾದರೂ ಅದು ಸಾಧ್ಯವಾಗುತ್ತಿಲ್ಲ. ದರ್ಶನ್ ಅವರ ಜಾಮೀನು ಅರ್ಜಿ ಈಗಾಗಲೇ ಕೆಳ ಹಂತದ ಕೋರ್ಟ್ನಲ್ಲಿ ರಿಜೆಕ್ಟ್ ಆಗಿದೆ. ಈ ಮಧ್ಯೆ ದರ್ಶನ್ಗೆ ಕೊಂಚ ರಿಲೀಫ್ ಆಗುವಂತಹ ಬೆಳವಣಿಗೆ ನಡೆದಿದೆ.ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಎ2 ಆರೋಪಿ ಆಗಿದ್ದಾರೆ. ಬಳ್ಳಾರಿ ಜೈಲಿನಲ್ಲಿರುವ ಅವರಿಗೆ ತೀವ್ರ ಬೆನ್ನು ನೋವು ಉಂಟಾಗಿದೆ. ಅವರಿಗೆ ಎಂಆರ್ಐ ಸ್ಕಾನಿಂಗ್ನ ಅಗತ್ಯವಿದೆ. ಇದನ್ನು ಮಾಡಿಸಲು ವೈದ್ಯರು ಸೂಚಿಸುತ್ತಲೇ ಬಂದಿದ್ದರು. ಆದರೆ, ಇದಕ್ಕೆ ದರ್ಶನ್ ಒಪ್ಪಿರಲಿಲ್ಲ. ಈಗ ಬಳ್ಳಾರಿಯ ವಿಮ್ಸ್ನಲ್ಲಿ ಎಂಆರ್ಐ ಸ್ಕಾನಿಂಗ್ ಮಾಡಿಸಲು ನಿರ್ಧರಿಸಲಾಗಿದೆ. ಇದಕ್ಕೆ ದರ್ಶನ್ ಕೂಡ ಒಪ್ಪಿಗೆ ನೀಡಿದ್ದಾರೆ.