ರೇಣುಕಾಸ್ವಾಮಿ ಹತ್ಯೆ ನಡೆದು 3 ತಿಂಗಳು ಕಳೆದಿದೆ. ಪ್ರಕರಣದಲ್ಲಿ 17 ಜನ ಆರೋಪಿಗಳು ವಿಚಾರಣಾಧೀನ ಕೈದಿಗಳಾಗಿ ಜೈಲು ಸೇರಿದ್ದಾರೆ. ಅವರ ಕುಟುಂಬದವರು ನೋವಿನಲ್ಲಿ ದಿನ ಕಳೆಯುವಂತಾಗಿದೆ. ರೇಣುಕಾಸ್ವಾಮಿ ಮಾಡಿದ ಕೆಟ್ಟ ಮೆಸೇಜ್ ನೋಡಿ ಪವಿತ್ರಾ ಗೌಡ ಕೋಪದ ಕೈಗೆ ಬುದ್ದಿ ಕೊಟ್ಟಿದ್ದರಿಂದ ಇಷ್ಟು ಜನ ನೋವು ಅನುಭವಿಸುವಂತಾಗಿದೆ ಎನ್ನುವ ಚರ್ಚೆ ನಡೀತಿದೆ.
ನಟ ದರ್ಶನ್ ಹಾಗೂ ಪವಿತ್ರಾ ಗೌಡ 10 ವರ್ಷಗಳಿಂದ ರಿಲೇಷನ್ಶಿಪ್ನಲ್ಲಿದ್ದಾರೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ್ದು ದರ್ಶನ್ ಅವರನ್ನು ಕೆರಳಿಸಿತ್ತು. ಹಾಗಾಗಿ ಆತನಿಗೆ ಬುದ್ದಿ ಕಲಿಸಲು ಮುಂದಾಗಿದ್ದರು. ಆತನಿಗೆ ಚಿತ್ರಹಿಂಸೆ ಕೊಟ್ಟಾಗ ಜೀವವೇ ಹೋಗಿದೆ ಎಂದು ಹೇಳಲಾಗುತ್ತಿದೆ. ಆರೋಪಿಗಳು ಕೂಡ ಪ್ರಕರಣದಲ್ಲಿ ತಮ್ಮ ಪಾತ್ರವೇನು ಎನ್ನುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.