ಸ್ಯಾಂಡಲ್ವುಡ್ಗೆ ಯಾಕೋ ನವೆಂಬರ್ ತಿಂಗಳು ಚೆನ್ನಾಗಿಲ್ಲ. ಒಂದರ ಹಿಂದೊಂದು ಘಟನೆಗಳು ನಡೆಯುತ್ತಲೇ ಇವೆ. ಒಂದು ಕನ್ನಡ ಚಿತ್ರರಂಗದ ದಿಗ್ಗಜರು ಇಹಲೋಕ ತ್ಯಜಿಸಿ ಶೋಕ ಸಾಗರದಲ್ಲಿ ಮುಳುಗಿಸಿದ್ದಾರೆ. ಇತ್ತ ಕನ್ನಡ ನಟ ತಾಂಡವ್ ರಾಮ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಅರೆಸ್ಟ್ ಆಗಿದ್ದಾರೆ. ಈ ಘಟನೆ ನಿನ್ನೆ (ನವೆಂಬರ್ 18)ರಂದು ನಡೆದಿದೆ.
ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿರುವ ಕನ್ನಡದ ಜನಪ್ರಿಯ ನಟ ತಾಂಡವ್ ರಾಮ್ ಅವರನ್ನು ಕೊಲೆ ಯತ್ನದ ಆರೋಪದ ಮೇಲೆ ಬಂಧಿಸಲಾಗಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ನಟಿಸಿದ 'ಮುಗಿಲ್ಪೇಟೆ' ಸಿನಿಮಾ ನಿರ್ದೇಶಿಸಿದ್ದ ಭರತ್ ಮೇಲೆ ತಾಂಡವ್ ರಾಮ್ ಗುಂಡು ಹಾರಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.