ದರ್ಶನ್ ಅಭಿನಯದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರವನ್ನು ಯಾರು ತಾನೇ ಹೇಗೆ ಮರೆಯಲು ಸಾಧ್ಯ. ದರ್ಶನ್ ವೃತ್ತಿ ಬದುಕಿನ ಪ್ರಮುಖ ಮೈಲಿಗಲ್ಲಿನಲ್ಲಿ ಈ ಚಿತ್ರ ಕೂಡ ಒಂದು. ರಾಯಣ್ಣನ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿದ್ದ ದರ್ಶನ್ ತಮ್ಮ ಅಭಿನಯದಿಂದ ಜನ ಮನಸೂರೆಗೊಂಡಿದ್ದರು.
ಇನ್ನೂ.. ಈ ಚಿತ್ರದ ನಿರ್ಮಾಪಕ ಆನಂದ್ ಅಪ್ಪುಗೋಳ್ ಆ ಕಾಲಕ್ಕೆ ಹಣವನ್ನು ನೀರಿನಂತೆ ಖರ್ಚು ಮಾಡಿದ್ದರು. ಚಿತ್ರವನ್ನು ಅದ್ಧೂರಿಯಾಗಿ ಬಿಡುಗಡೆಯನ್ನು ಮಾಡಿದ್ದರು. ಆದರೆ, ಈ ಅದೃಷ್ಟ ಅನ್ನೋದು ಎಂಥವರ ಬದುಕನ್ನೂ ಬದಲಾಯಿಸಿಬಿಡುತ್ತೆ. ಅದೇ ಕೈ ಕೊಟ್ಟಾಗ ಚಿನ್ನದಂತಿದ್ದ ಬದುಕು ಚಿತ್ರಾನ್ನವಾಗುತ್ತೆ. ಇದಕ್ಕೆ ಇನ್ನೊಂದು ಉದಾಹರಣೆ ಎಂಬಂತೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರವನ್ನು ನಿರ್ಮಾಣ ಮಾಡಿದ ಆನಂದ್ ಅಪ್ಪುಗೋಳ್ ಆ ನಂತರ ಬಹು ಕೋಟಿ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡರು.