ವಿಶ್ವದೆಲ್ಲೆಡೆ ವ್ಯಾಪಕವಾಗಿ ಹಬ್ಬುತ್ತಿರುವ ಕಾಯಿಲೆಗಳಲ್ಲಿ ಮಾನಸಿಕ ಖಿನ್ನತೆಗೆ ಮೊದಲ ಸ್ಥಾನ ಇದೆ. ಒಂದು ಅಧ್ಯಯನದ ಪ್ರಕಾರ ಭಾರತದಲ್ಲಿ ಪ್ರತಿ 20 ಜನರಲ್ಲಿ ಒಬ್ಬರಿಗೆ ಈ ಕಾಯಿಲೆ ಇದೆ. ಸಾವು, ಸೋಲು, ನಿರಾಶೆ, ಕಷ್ಟ, ನಷ್ಟಗಳಿಂದ ಅನೇಕರು ಖಿನ್ನತೆಗೊಳಗಾಗುತ್ತಾರೆ.
ಕೆಲ ಒಮ್ಮೆ ಖಿನ್ನತೆಯಿಂದ ಪಾರಾಗುತ್ತಾರೆ. ಕೆಲ ದಿನಗಳಲ್ಲಿ ಚೇತರಿಸಿಕೊಳ್ಳುತ್ತಾರೆ. ಆದರೆ ಇನ್ನೂ ಕೆಲವೊಮ್ಮೆ ಈ ಖಿನ್ನತೆಯಿಂದ ಹೊರ ಬರಲು ಸಾಧ್ಯವಾಗದೇ ಬದುಕೇ ಬೇಡ ಸತ್ತರೆ ಚೆಂದ ಎಂದುಕೊಂಡು ಆತುರದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಶೋಭಿತಾ ಶಿವಣ್ಣ ಕೂಡ ಹೀಗೆ ದುಡುಕಿನ ನಿರ್ಧಾರವನ್ನು ತೆಗೆದುಕೊಂಡರಾ ಎನ್ನುವ ಅನುಮಾನ ಈಗ ಕಿರುತೆರೆಯ ಉದ್ಯಮಕ್ಕೆ ಕಾಡುತ್ತಿದೆ. ಇದಕ್ಕೆ ಕಾರಣ ಸಿಕ್ಕ ಡೆತ್ ನೋಟ್.