Current Date 06 May, 2026

ಶಿವಾಜಿ ಮಹಾರಾಜನ ಬಯೋಪಿಕ್ ಘೋಷಿಸಿದ ರಿಷಬ್ ಶೆಟ್ಟಿ; ಕನ್ನಡಿಗರ ಬೇಸರ

'ಕಾಂತಾರ' ನಟ ರಿಷಬ್ ಶೆಟ್ಟಿ ಇದೀಗ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಬ್ಯುಸಿ ಆಗುತ್ತಿದ್ದಾರೆ. ಈಗಾಗಲೇ ತೆಲುಗಿನ 'ಜೈ ಹನುಮಾನ್' ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸದ್ಯ ಶಿವಾಜಿ ಮಹಾರಾಜರ ಜೀವನಾಧರಿತ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಅಧಿಕೃತವಾಗಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ 'ಛತ್ರಪತಿ ಶಿವಾಜಿ ಮಹಾರಾಜ್' ಸಿನಿಮಾ ಮೂಡಿ ಬರಲಿದೆ. ಚಿತ್ರದಲ್ಲಿ ಶಿವಾಜಿ ಪಾತ್ರಕ್ಕೆ ರಿಷಬ್ ಬಣ್ಣ ಹಚ್ಚಿದ್ದಾರೆ. ಬಾಲಿವುಡ್ ನಿರ್ಮಾಪಕ, ನಿರ್ದೇಶಕ ಸಂದೀಪ್ ಸಿಂಗ್ ಚಿತ್ರದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆದರೆ ರಿಷಬ್ ಈ ಚಿತ್ ಒಪ್ಪಿಕೊಂಡಿರುವ ಬಗ್ಗೆ ಕೆಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. "ಬೇಡ ಶೆಟ್ರೆ" ಎಂದು ಕಾಮೆಂಟ್ ಮಾಡುತ್ತಿದ್ದಾರೆ.