ಹಿಂದಿಯಲ್ಲಿ ಜನಪ್ರಿಯವಾದ 'ಕೌನ್ ಬನೇಗಾ ಕರೋಡ್ಪತಿ' ಶೋ ಮುಂದೆ ದಕ್ಷಿಣದ ಭಾಷೆಗಳಲ್ಲಿ ಕೂಡ ಯಶಸ್ವಿಯಾಗಿತ್ತು. ಕನ್ನಡದಲ್ಲಿ ಪುನೀತ್ ರಾಜ್ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿ ಜನಮನ ಗೆದ್ದರು. ಇದೀಗ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಕೋಟಿ ಗೆಲ್ಲುವ ವೇದಿಕೆ ಏರುತ್ತಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿರುವ ನಟ ಶಿವರಾಜ್ಕುಮಾರ್ ಶೀಘ್ರದಲ್ಲೇ ಅಮೆರಿಕಾಗೆ ತೆರಳುತ್ತಿದ್ದಾರೆ. ಅಲ್ಲಿ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಅದಕ್ಕೂ ಮುನ್ನ ತಿರುಪತಿಗೆ ಭೇಟಿ ನೀಡಿ ಶಿವಣ್ಣ- ಗೀತಾ ದಂಪತಿ ಮುಡಿ ಕೊಟ್ಟು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೊಗಳು ವೈರಲ್ ಆಗಿತ್ತು.