Current Date 15 May, 2026

ದರ್ಶನ್ ಬೇಡ ಅಂದ್ರು, ಆದರೂ ದುಡ್ಡು ಕೊಟ್ಟೆ, ಈಗ ನೋಡಿದ್ರೆ- ಯುವ ನಿರ್ದೇಶಕ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದಿಢೀರ್ ನಟ ದರ್ಶನ್ ಬಂಧನವಾಗಿತ್ತು. ಎಲ್ಲಾ ಕೆಲಸಗಳನ್ನು ಅಲ್ಲಲ್ಲೇ ಬಿಟ್ಟು ಪೊಲೀಸ್ ವಿಚಾರಣೆ ಎದುರಿಸುವಂತಾಯಿತು. ಬಳಿಕ ನ್ಯಾಯಾಂಗ ಬಂಧನಕ್ಕೆ ಒಳಪಟ್ಟರು. ದರ್ಶನ್ ಪರಪ್ಪನ ಅಗ್ರಹಾರ ಸೇರಿ ಒಂದು ತಿಂಗಳು ಕಳೆದಿದೆ. ಯಾವಾಗ ಬಿಡುಗಡೆ ಆಗಿ ಹೊರ ಬರುತ್ತಾರೆ ಎನ್ನುವುದು ಗೊತ್ತಿಲ್ಲ.

'ಕಾಟೇರ' ಸಿನಿಮಾ ಮಾಡಿ ದರ್ಶನ್ ಗೆದ್ದಿದ್ದರು. ಇದೇ ಸಂಭ್ರಮದಲ್ಲಿ 'ಡೆವಿಲ್' ಸಿನಿಮಾ ಒಪ್ಪಿಕೊಂಡಿದ್ದರು. ಮೊದಲು ಒಂದು ವಾರ ಚಿತ್ರೀಕರಣ ನಡೆದಿತ್ತು. ಅದೇ ಸಮಯದಲ್ಲಿ ಗಾಯಗೊಂಡು ಕೈಗೆ ಸರ್ಜರಿ ಮಾಡಿಸಿಕೊಳ್ಳುವಂತಾಯಿತು. ಕೈ ನೋವಿನ ನಡುವೆ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗಿ ಆಗಿದ್ದರು. ಬಳಿಕ ಮತ್ತೆ 'ಡೆವಿಲ್' ಚಿತ್ರೀಕರಣ ಆರಂಭವಾಗಿತ್ತು. ಅಷ್ಟರಲ್ಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು.