ಎಲ್ಲಾ ಅಂದುಕೊಂಡಂತೆ ಆಗಿದ್ದರೆ ದರ್ಶನ್ ನಟನೆಯ 'ಡೆವಿಲ್' ಸಿನಿಮಾ ದಸರಾ ಸಂಭ್ರಮದಲ್ಲಿ ತೆರೆಗೆ ಬರಬೇಕಿತ್ತು. ಅಕ್ಟೋಬರ್ನಲ್ಲಿ ಸಿನಿಮಾ ತೆರೆಗೆ ತರಲು ಸಾಧ್ಯವಾದಷ್ಟು ಪ್ರಯತ್ನಿಸುವುದಾಗಿ ಸ್ವತಃ ದರ್ಶನ್ ಹೇಳಿದ್ದರು. ಕೈಗೆ ಪೆಟ್ಟಾಗಿ ಚಿತ್ರೀಕರಣ ತಡವಾಗಿತ್ತು. ಬಳಿಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್ ಜೈಲು ಸೇರುವಂತಾಯಿತು.