Current Date 09 May, 2026

"ಸಿಟ್ಟನ್ನು ಸ್ಕ್ರಿಪ್ಟ್ ಮಾಡಬೇಕು, ದ್ವೇಷನಾ ಕ್ಯಾರೆಕ್ಟರ್ ಮಾಡ್ಬೇಕು, ನಿಜ ಜೀವನದಲ್ಲಿ ತರಬಾರದು"; ಹಂಸಲೇಖ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್ ಜೈಲು ಸೇರಿದ್ದಾರೆ. ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ಪರ ಚಿತ್ರರಂಗದ ಒಬ್ಬೊಬ್ಬರೇ ಕಲಾವಿದರು ಮುಂದೆ ಒಂದು ಮಾತಾಡುತ್ತಿದ್ದಾರೆ. ರಚಿತಾ ರಾಮ್, ರಕ್ಷಿತಾ, ಪ್ರೇಮ್ ಸೇರಿದಂತೆ ಸಾಕಷ್ಟು ಮಂದಿ ದರ್ಶನ್ ಪರ ನಿಂತಿದ್ದಾರೆ. ಈಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದರ್ಶನ್ ಜೈಲು ಸೇರಿರುವ ಬಗ್ಗೆ ಮಂಡ್ಯದಲ್ಲಿ ನಾದಬ್ರಹ್ಮ ಹಂಸಲೇಖ ಪ್ರತಿಕ್ರಿಯಿಸಿದ್ದಾರೆ. ದರ್ಶನ್ ತನ್ನ ಮಗು ಇದ್ದಂತೆ. ತಂದೆಗೆ ಎಷ್ಟು ನೋವಾಗುತ್ತೋ ಅಷ್ಟೇ ನೋವು ನನಗೂ ಆಗಿದೆ ಎಂದು ಹೇಳಿದ್ದಾರೆ. ಹಂಸಲೇಖ ಹೇಳಿದ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.