ರಾಕಿಂಗ್ ಸ್ಟಾರ್ 'ಟಾಕ್ಸಿಕ್' ಸಿನಿಮಾ ಚಿತ್ರೀಕರಣ ಆರಂಭಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಇಂತ ಸಮಯದಲ್ಲಿ ನಟ ಯಶ್ 'ಟಾಕ್ಸಿಕ್' ಚಿತ್ರತಂಡದ ಜೊತೆ ಧರ್ಮಸ್ಥಳ ಹಾಗೂ ಬೆಳ್ತಂಡಗಿ ಸೂರ್ಯ ಸದಾಶಿವ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ಜೊತೆ ಸೇರಿ ಮಣ್ಣಿನ ಗೊಂಬೆ ಹರಕೆ ಕ್ಷೇತ್ರದಲ್ಲಿ ಹರಕೆ ತೀರಿಸಿದ್ದಾರೆ.
ಬಿಳಿ ಶರ್ಟ್ ಹಾಗೂ ಪಂಚೆ ಉಟ್ಟು ಯಶ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರು ವೀಡಿಯೋ ವೈರಲ್ ಆಗುತ್ತಿದೆ. ಇನ್ನು ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನದ ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಆಗಿದ್ದಾರೆ. ಪತ್ನಿ ಹಾಗೂ ಮಕ್ಕಳ ಜೊತೆ ಯಶ್ ಕಾಣಿಸಿಕೊಂಡಿದ್ದಾರೆ. ಇನ್ನು 'ಟಾಕ್ಸಿಕ್' ಸಿನಿಮಾ ನಿರ್ಮಾಪಕ ವೆಂಕಟ್ ಕೋನಂಕಿ ಕೂಡ ಫ್ಯಾಮಿಲಿ ಸಮೇತ ಸಾಥ್ ನೀಡಿದ್ದಾರೆ.