Current Date 15 May, 2026

ಅಪ್ಪಿತಪ್ಪಿ ದರ್ಶನ್ ನಮ್ಮ ಮನೆಗೆ ಬಂದ್ರೆ...; ರೇಣುಕಾಸ್ವಾಮಿ ತಂದೆ ಮಾತು

ರೇಣುಕಾಸ್ವಾಮಿ ಕೊನೆಯುಸಿರೆಳೆದು ಒಂದೂವರೆ ತಿಂಗಳು ಕಳೆದಿದೆ. ನಟಿ ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ ಕಾರಣಕ್ಕೆ ನಟ ದರ್ಶನ್ & ಗ್ಯಾಂಗ್ ಆತನನ್ನು ಅಪಹರಿಸಿ ಚಿತ್ರಹಿಂಸೆ ಕೊಟ್ಟು ಕೊಂದಿದ್ದಾರೆ ಎನ್ನುವ ಆರೋಪ ಇದೆ. ಪ್ರಕರಣದಲ್ಲಿ ದರ್ಶನ್ ಸೇರಿ 17 ಜನ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಪುಸಲಾಯಿಸಿ ಬೆಂಗಳೂರಿಗೆ ಕರೆತರಲಾಗಿತ್ತು. ಪಟ್ಟಣಗೆರೆಯ ಶೆಡ್‌ನಲ್ಲಿ ಆತನನ್ನು ಕೂಡಿ ಹಾಕಿ ಥಳಿಸಿದ್ದರು. ಸದ್ಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಚಾರ್ಜ್‌ಶೀಟ್ ಸಲ್ಲಿಕೆ ಆಗಲಿದೆ. ಇನ್ನು ರೇಣುಕಾಸ್ವಾಮಿ ಪತ್ನಿ ಸಹನಾ ಗರ್ಭಿಣಿಯಾಗಿದ್ದು ಕುಟುಂಬಸ್ಥರ ದುಃಖ ಇನ್ನು ಕಮ್ಮಿ ಆಗಿಲ್ಲ. ಮನೆಯ ಆಧಾರಸ್ತಂಭವನ್ನು ಕಳೆದುಕೊಂಡು ಕುಟುಂಬ ಕಂಗಾಲಾಗಿದೆ.