Current Date 09 May, 2026

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಾಸ್ಯನಟ ಚಿಕ್ಕಣ್ಣಗೆ ಶುರುವಾಯ್ತು ಭೀತಿ!

ಕೆಟ್ಟ ಮೆಸೇಜ್ ಮಾಡಿದ್ದ ಕಾರಣಕ್ಕೆ ರೇಣುಕಾಸ್ವಾಮಿ ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಕೇಳಿಬಂದಿದೆ. ಈಗಾಗಲೇ 13 ಜನರನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಮತ್ತಷ್ಟು ಜನರನ್ನು ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಕಳೆದೊಂದು ವಾರದಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಪರಭಾಷಾ ಕಲಾವಿದರು ಕೂಡ ಈ ಬಗ್ಗೆ ಮಾತನಾಡುತ್ತಿದ್ದಾರೆ. ಇನ್ನು ತನಿಖೆ ಹೆಚ್ಚಾದಾಗ ದರ್ಶನ್ ಆಪ್ತರಲ್ಲಿ ಹಲವರಿಗೆ ಢವ ಢವ ಶುರುವಾಗಿದೆ. ಶನಿವಾರ(ಜೂನ್ 8) ಮಧ್ಯಾಹ್ನ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ನಡೆದ ಪಾರ್ಟಿಯಲ್ಲಿ ಮತ್ತೊಬ್ಬ ನಟ ಭಾಗಿ ಆಗಿದ್ದರು ಎನ್ನಲಾಗ್ತಿದೆ. ಈ ಸಂಬಂಧ ಆತನಿಗೆ ಪೊಲೀಸರು ನೊಟೀಸ್ ನೀಡಿ ವಿಚಾರಣೆಗೆ ಕರೆಸುವ ಸಾಧ್ಯತೆಯಿದೆ.