ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜುಲೈ 18ರವರೆಗೆ ನ್ಯಾಯಾಂಗ ಬಂಧನ ಮುಂದುವರೆಯಲಿದೆ. ಕೇಂದ್ರ ಕಾರಾಗೃಹದಲ್ಲಿ ವಿಚಾರಧೀನ ಕೈದಿಯಾಗಿ ದರ್ಶನ್ ಈಗಾಗಲೇ 18 ದಿನ ಕಳೆದಿದ್ದಾರೆ.
ನಟ ದರ್ಶನ್ ಜೈಲು ವಾಸಕ್ಕೆ ಬೇಸತ್ತಿದ್ದಾರೆ. ಜೈಲಿನಲ್ಲಿ ಖೈದಿಗಳಿಗೆ ನೀಡುವ ಊಟ ಸೇರದೇ, ನಿದ್ದೆ ಬಾರದೇ ತೂಕ ಕಳೆದುಕೊಂಡಿದ್ದಾರೆ. ಇನ್ನು ಯೋಚಿಸಿ ಪ್ರಯೋಜನವಿಲ್ಲ ಎಂದು ಮನೆ ಊಟ, ಹಾಸಿಗೆ ಹಾಗೂ ಓದಲು ಪುಸ್ತಕ ನೀಡುವಂತೆ ವಕೀಲರ ಮೂಲಕ ದರ್ಶನ್ ಹೈಕೋರ್ಟ್ನಲ್ಲಿ ಮನವಿ ಮಾಡಿದ್ದಾರೆ. ಈ ಸಂಬಂಧ ರಿಟ್ ಅರ್ಜಿ ಸಲ್ಲಿಕೆಯಾಗಿದೆ.