Current Date 25 Aug, 2026

''ಜೈಲಿಂದ ದರ್ಶನ್ ಹೊರಬಂದರೆ ಮನೆ ತಲುಪೋಕೆ ಒಂದು ದಿನ ಬೇಕಾಗುತ್ತೆ''...!

ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಅರೆಸ್ಟ್ ಆಗಿ ಒಂದು ತಿಂಗಳು ಕಳೆದಿದೆ. ದರ್ಶನ್ ಅವರ ನಿಜವಾದ ಅಭಿಮಾನಿಗಳು ತಮ್ಮ ಆರಾಧ್ಯ ನಟ ಮತ್ತು ಅವರ ಗ್ಯಾಂಗ್ ಮಾಡಿದ ಕೃತ್ಯವನ್ನು ಕಂಡು ಮರುಕ ಪಟ್ಟಿದ್ದಾರೆ. ʻಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕಿದ್ದ ಒಬ್ಬ ನಟ ಹೀಗೆ ದೃಷ್ಕೃತ್ಯದ ಪಾಲುದಾರನಾಗಿ ಜೈಲು ಸೇರಿದರಲ್ಲಾʼ ಅಂಥಾ ಕೊರಗುತ್ತಿದ್ದಾರೆ.

ಆದರೆ.. ಇನ್ನೂ ಕೆಲವರು ದರ್ಶನ್ ಅಭಿಮಾನಿಗಳ ಹೆಸರಿನಲ್ಲಿ ಮಾಡಬಾರದ ಕೆಲಸಗಳನ್ನೆಲ್ಲಾ ಮಾಡುತ್ತಿದ್ದಾರೆ. ಉಳಿದವರು ದರ್ಶನ್ ಮಾಡಿರುವ ಕೆಲಸವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಕೇವಲ ಅಭಿಮಾನಿಗಳಷ್ಟೇ ಅಲ್ಲ, ಭಾವನಾ.. ಸಂಜನಾ.. ಸೇರಿ ಕನ್ನಡ ಚಿತ್ರರಂಗದ ಅನೇಕರು ದರ್ಶನ್ ಗೆ ಬಹುಪರಾಕ್ ಹಾಕುತ್ತಿದ್ದಾರೆ. ಈ ಸಾಲಿಗೀಗ ಅಯೋಗ್ಯ ಮಹೇಶ್ ಕೂಡ ಸೇರಿಕೊಂಡಿದ್ದಾರೆ.