ದಿನಕರ್ ತೂಗದೀಪ ನಿರ್ದೇಶನದ 'ನವಗ್ರಹ' ಸಿನಿಮಾ ಕಳೆದ ವಾರ ರೀ-ರಿಲೀಸ್ ಆಗಿತ್ತು. ಬರೋಬ್ಬರಿ 16 ವರ್ಷಗಳ ಬಳಿಕ ಸಿನಿಮಾ ಪ್ರೇಕ್ಷಕರ ಮುಂದೆ ಬಂದಿತ್ತು. ದರ್ಶನ್ ಅಭಿಮಾನಿಗಳಿಂದ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಕೆಜಿ ರಸ್ತೆಯ ನರ್ತಕಿ ಹಾಗೂ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರಗಳಲ್ಲಿ ಸೆಲಬ್ರೇಷನ್ ಜೋರಾಗಿತ್ತು.
ದರ್ಶನ್ ತಮ್ಮದೇ ತೂಗುದೀಪ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ 'ನವಗ್ರಹ' ಸಿನಿಮಾ ನಿರ್ಮಿಸಿದ್ದರು. ಕನ್ನಡ ಚಿತ್ರರಂಗದ ಖ್ಯಾತ ಖಲನಟರ ಮಕ್ಕಳು ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ದರ್ಶನ್ ಜೊತೆಗೆ ವಿನೋದ್ ಪ್ರಭಾಕರ್, ಸೃಜನ್ ಲೋಕೇಶ್, ಧರ್ಮ ಕೀರ್ತಿರಾಜ್, ನಾಗೇಂದ್ರ ಅರಸ್, ತರುಣ್ ಸುಧೀರ್, ಗಿರಿ ದಿನೇಶ್ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.