Current Date 09 May, 2026

ದರ್ಶನ್‌ ಭೇಟಿ ಬೆನ್ನಲ್ಲೇ ಹಿರಿಯ ಪತ್ರಕರ್ತನನ್ನು ಹೊಗಳಿ ಇತರರ ಕಿವಿ ಹಿಂಡಿದ ರಕ್ಷಿತಾ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸಿಲುಕಿಕೊಂಡಿರುವುದು ದೇಶಾದ್ಯಂತ ಸದ್ದು ಮಾಡ್ತಿದೆ. ರಾಷ್ಟ್ರೀಯ ಮಾಧ್ಯಮಗಳಲ್ಲಿ ಕೂಡ ಈ ಸುದ್ದಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಸ್ಟಾರ್ ನಟನೊಬ್ಬ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡಿರುವುದು ಅಚ್ಚರಿ ಮೂಡಿಸಿದೆ. ಕನ್ನಡ ಮಾಧ್ಯಮಗಳಲ್ಲಿ ಈ ಸುದ್ದಿ ನಿರಂತವಾಗಿ ಪ್ರಸಾರವಾಗುತ್ತಾ ಬರುತ್ತಿದೆ.

ಕಳೆದ 22 ದಿನಗಳಿಂದ ನಟ ದರ್ಶನ್ ಬಂಧನ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಕೂಡ ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಪೊಲೀಸರ ವಿಚಾರಣೆ ತನಿಖೆಯ ಬಗ್ಗೆಯೂ ಕ್ಷಣಕ್ಷಣದ ಮಾಹಿತಿನನ್ನು ಜನರಿಗೆ ತಲುಪಿಸುವ ಪ್ರಯತ್ನ ನಡೆಯುತ್ತಿದೆ. ಇನ್ನು ಕೆಲ ಮಾಧ್ಯಮಗಳಲ್ಲಿ ಬಳಸುತ್ತಿರುವ ಭಾಷೆಯ ಬಗ್ಗೆ ನಟಿ ರಕ್ಷಿತಾ ಪ್ರೇಮ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ.