Current Date 26 Aug, 2026

ದರ್ಶನ್‌ಗೆ ಮತ್ತೊಂದು ಸಂಕಷ್ಟ: ಈ ಬಾರಿ ಪತಿ ಜೊತೆ ತೊಂದರೆಯಲ್ಲಿ ಸಿಕ್ಕಿಕೊಂಡ ವಿಜಯಲಕ್ಷ್ಮಿ !

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಬೆನ್ನಲ್ಲೇ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಆರೋಪಿ ನಂ 2 ಆಗಿದ್ದಾರೆ. ಇದೇ ಪ್ರಕರಣದಲ್ಲಿ ಗೆಳತಿ ಪವಿತ್ರಾ ಗೌಡ ಮೊದಲನೇ ಆರೋಪಿ ಆಗಿದ್ದಾರೆ. ಈಗ ದರ್ಶನ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಇದರಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೊದಲನೇ ಆರೋಪಿ ಆಗಿದ್ದಾರೆ.

ದರ್ಶನ್ ಈ ಬಾರಿ ಸರಿಯಾಗಿ ಲಾಕ್ ಆಗಿದ್ದಾರೆ ಅಂತ ಅನಿಸುತ್ತಿದೆ. ಅದರಲ್ಲೂ ಕೊಲೆ ಕೇಸ್‌ನಲ್ಲಿ ದರ್ಶನ್ ಹೆಸರು ಕೇಳಿಬಂದಿದ್ದು, ಸದ್ಯ ಇದು ಮುಗಿಯುವ ಹಾಗೆ ಕಾಣುತ್ತಿಲ್ಲ. ಅಷ್ಟೇ ಮತ್ತೊಂದು ಸಂಕಷ್ಟ ಇವರನ್ನು ಹುಡುಕಿಕೊಂಡು ಬಂದಿದೆ. ಅಷ್ಟೇ ಅಲ್ಲ ಇವರ ತಪ್ಪಿಗೀಗ ಪತ್ನಿ ವಿಜಯಲಕ್ಷ್ಮಿ ಕೂಡ ತೊಂದರೆಗೆ ಸಿಕ್ಕಿಕೊಂಡಂತೆ ಆಗಿದೆ.